ಪಿಯುಸಿ ಪಬ್ಲಿಕ್ ಪರೀಕ್ಷೆಯ ಸಾಧಕ ಅವಿಜಿತ್ ಶೆಟ್ಟಿಗೆ ಸನ್ಮಾನ

ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ 600 ರಲ್ಲಿ 590 ಅಂಕ ಪಡೆದ ಉಪ್ಪುಂದ ಕಟ್ಕೆರೆ ವಿಜಯ್ ಕುಮಾರ್ ಶೆಟ್ಟಿ ಮತ್ತು ವಂಡ್ಸೆ ಕೊರ್ಗಿ ಮನೆ ಅಂಬಿಕಾ ಶೆಟ್ಟಿ ದಂಪತಿಗಳ ಪುತ್ರ ಶ್ರೀ ಅಭಿಜಿತ್ ಶೆಟ್ಟಿ ಇವನ ಸಾಧನೆಯನ್ನು ಗುರುತಿಸಿ ಬೈಂದೂರು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಸಾಲ್ಗದ್ದೆ ಶಶಿಧರಶೆಟ್ಟಿ ಯವರ ನೇತೃತ್ವದ ಪದಾಧಿಕಾರಿಗಳು ಹಾಗೂ ಗಣ್ಯರು ವಿದ್ಯಾರ್ಥಿಯ ಮನೆಗೆ ತೆರಳಿ ಅಭಿನಂದಿಸಿದರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಅಡಿಕೆ ಕೊಡ್ಲು ಫಲ ಪುಷ್ಪಗಳೊಂದಿಗೆ ಗೌರವಿಸಿ ಶುಭಕೋರಿದರು.


ಉದ್ಯಮಿ ಸಂಘದ ಉಪಾಧ್ಯಕ್ಷ ಜಗದೀಶ್ ಶೆಟ್ಟಿ ನಗದು ಪ್ರೋತ್ಸಾಹ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಉದ್ಯಮಿ ಹರ್ಜಿ ಕರುಣಾಕರ ಶೆಟ್ಟಿ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಕೆ ಶಿವರಾಂ ಶೆಟ್ಟಿ, ಉದ್ಯಮಿ ರಿತೇಶ್ ಶೆಟ್ಟಿ ಕುಕನಾಡು ಹಿರಿಯರಾದ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

About the Author

You may also like these