ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ ತಗ್ಗರ್ಸೆಯ ಮೈತ್ರಿ ಎಸ್ ಶೆಟ್ಟಿ ಇವಳನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಶ್ರೀ ಸಾಲ್ಗದ್ದೆ ಶಶಿಧರ್ ಶೆಟ್ಟಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಕರುಣಾಕರ್ ಶೆಟ್ಟಿ ನೆಲ್ಯಾಡಿ ಕಾರ್ಯದರ್ಶಿ ನಿತಿನ್ ಬಿ ಶೆಟ್ಟಿ ಬೈಂದೂರು ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಬೈಂದೂರು ಸಂಘದ ಪದಾಧಿಕಾರಿ ದಿವಾಕರ್ ಶೆಟ್ಟಿ ನೆಲ್ಯಾಡಿ ಹಾಗೂ ಹೋಟೆಲ್ ಉದ್ಯಮಿ ಸುಭಾಷ್ ಚಂದ್ರ ಶೆಟ್ಟಿ ಹೆಮ್ಮುಂಜೆ ಮೊದಲಾದವರು ಉಪಸ್ಥಿತರಿದ್ದು ಅಭಿನಂದಿಸಿದರು.